ಹೊಸದುರ್ಗ: ಸೆ.25ರಂದು ಫಿಟ್ ಇಂಡಿಯಾ ಪ್ರೀಡಂ ರನ್ ಕಾರ್ಯಕ್ರಮ.

 

 

 

 

ಚಿತ್ರದುರ್ಗ,ಸೆಪ್ಟೆಂಬರ್23:
ಭಾರತ ಸರ್ಕಾರ ನೆಹರು ಯುವ ಕೇಂದ್ರ, ಜಿಲ್ಲಾ ಆಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಚಿತ್ರದುರ್ಗ ಹಾಗೂ ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ, ಪುರಸಭೆ, ಸರ್ಕಾರಿ ನೌಕರರ ಸಂಘ, ರೆಡ್‌ಕ್ರಾಸ್ ಸಂಸ್ಥೆ, ಸ್ಕೌಟ್ಸ್ ಅಂಡ್ ಗೈಡ್ಸ್, ಹೊಸದುರ್ಗ ಇವರ ಸಂಯುಕ್ತಾಶ್ರಯದಲ್ಲಿ ಆಜಾದಿ ಕಾ ಅಮೃತ ಮಹೋತ್ಸವ ಹಾಗೂ ಪಂಡಿತ್ ದೀನದಯಾಳ್ ಉಪಾಧ್ಯಾಯ ಅವರ ಜನ್ಮ ದಿನಾಚರಣೆ ಅಂಗವಾಗಿ ಸೆಪ್ಟೆಂಬರ್ 25ರಂದು ಬೆಳಿಗ್ಗೆ 7ಕ್ಕೆ ಹೊಸದುರ್ಗ ಪಟ್ಟಣದ ವೀರಭದ್ರಸ್ವಾಮಿ ದೇವಸ್ಥಾನದಿಂದ ತಾಲ್ಲೂಕು ಕ್ರೀಡಾಂಗಣದವರೆಗೆ  ಸ್ವಾಸ್ಥö್ಯ ಸಮಾಜ, ಸ್ವಾಸ್ಥö್ಯ ದೇಶಕ್ಕಾಗಿ ಫಿಟ್ ಇಂಡಿಯಾ ಪ್ರೀಡಂ ರನ್-02 ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.
ಹೊಸದುರ್ಗ ಶಾಸಕರಾದ ಗೂಳಿಹಟ್ಟಿ ಡಿ. ಶೇಖರ್ ಕಾರ್ಯಕ್ರಮಕ್ಕೆ ಚಾಲನೆ ನೀಡುವರು. ರಾಜ್ಯ ಖನಿಜ ನಿಗಮದ ಅಧ್ಯಕ್ಷ ಲಿಂಗಮೂರ್ತಿ, ಹೊಸದುರ್ಗ ಪುರಸಭೆ ಅಧ್ಯಕ್ಷ ಶ್ರೀನಿವಾಸ್ ಭಾಗವಹಿಸುವರು ಎಂದು ಜಿಲ್ಲಾ ವಾರ್ತಾಧಿಕಾರಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕರಾದ ಬಿ.ಧನಂಜಯ, ಜಿಲ್ಲಾ ಯುವ ಜನ ಅಧಿಕಾರಿ ಎನ್.ಸುಹಾಸ್ ತಿಳಿಸಿದ್ದಾರೆ.
=====

 

 

[t4b-ticker]

You May Also Like

More From Author

+ There are no comments

Add yours